ದಾವಣಗೆರೆ. ನ.22
ದಾವಣಗೆರೆ ಜಿಲ್ಲಾ ಶಿಶು ಕಲ್ಯಾಣ ಮಂಡಳಿಯ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ವನಿತಾ ಸಮಾಜದಲ್ಲಿ ಏರ್ಪಡಿಸಲಾಗಿದ್ದ ವರ್ಷದ ಉತ್ತಮ ಪ್ರೌಢಶಾಲಾ ವಿದ್ಯಾರ್ಥಿ ಆಯ್ಕೆ ಸ್ಪರ್ಧೆಯಲ್ಲಿ ನಗರದ ಸಿದ್ಧಗಂಗಾ ಪ್ರೌಢಶಾಲೆಯ ವಿದ್ಯಾರ್ಥಿನಿ ಯಶಸ್ವಿನಿ ಕೆ.ಪಿ ಆಯ್ಕೆಯಾಗಿದ್ದಾಳೆ. ನವೆಂಬರ್ 24 ರ ಭಾನುವಾರ ಸಂಜೆ 5 ಗಂಟೆಗೆ ವನಿತಾ ಸಮಾಜದಲ್ಲಿ ಯಶಸ್ವಿನಿ ಕೆ.ಪಿ ಯ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.ಸಿದ್ಧಗಂಗಾ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ಯಶಸ್ವಿನಿ ಕೆ.ಪಿ ಪ್ರತಿಭಾವಂತೆ, ಪಠ್ಯಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಬಾಲಕಿ, ಹಲವಾರು ಬಹುಮಾನಗಳ ವಿಜೇತೆ, ಇಂಡಿಯನ್ ಟ್ಯಾಲೆಂಟ್ ಪರೀಕ್ಷೆಯಲ್ಲಿ RANK , ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ರಾಜ್ಯ ಮಟ್ಟದ ವಿಜ್ಞಾನ ವಿಚಾರ ಸಂಕಿರಣದಲ್ಲಿ ಮತ್ತು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿ ಶಾಲಾಮಟ್ಟದಲ್ಲಿ ನಡೆಯುವ ಅನೇಕ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾಳೆ. ಸಮರ್ಥನಾಯಕತ್ವ ಗುಣ ಹೊಂದಿರುವ ಈ ಬಾಲಕಿ ವಿನಯ ಸಂಪನ್ನೆ ಎಂದು ಶಾಲಾ ಮುಖ್ಯಶಿಕ್ಷಕಿ ರೇಖಾರಾಣಿಯವರು ಶ್ಲಾಘಿಸಿದ್ದಾರೆ. 10 ನೇ ತರಗತಿಯ ಶಿಕ್ಷಕ ವೃಂದ ಮತ್ತು ಸಹಪಾಠಿಗಳು ಯಶಸ್ವಿನಿಯನ್ನು ಅಭಿನಂದಿಸಿದ್ದಾರೆ. ಯಶಸ್ವಿನಿಯ ತಂದೆ ಪಾಲಾಕ್ಷಪ್ಪ ಮತ್ತು ತಾಯಿ ಜ್ಯೋತಿಕಲಾ ಅವರು ಮಗಳ ಆಯ್ಕೆಯನ್ನು ಸಂಭ್ರಮದಿಂದ ಹಂಚಿಕೊಂಡಿದ್ದಾರೆ.
No comments:
Post a Comment