Saturday, February 15, 2025

ಪುಲ್ವಾಮ ದಿನಾಚರಣೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಶ್ರೀಸಿದ್ಧಗಂಗಾ ಸ್ಥಳೀಯ ಸಂಸ್ಥೆ

 ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಶ್ರೀಸಿದ್ಧಗಂಗಾ ಸ್ಥಳೀಯ ಸಂಸ್ಥೆ ದಾವಣಗೆರೆ ದಿನಾಂಕ 14-02-2025 ರಂದು ದಾವಣಗೆರೆ ಜಿಲ್ಲಾಸಂಸ್ಥೆ ಹಾಗು ಶ್ರೀ ಸಿದ್ಧಗಂಗಾ ಸ್ಥಳೀಯ ಸಂಸ್ಥೆಯ ಸಹಯೋಗದೊಂದಿಗೆ ಪುಲ್ವಾಮ ದಿನಾಚರಣೆಯನ್ನು ಆಚರಿಸಲಾಯಿತು ಜಸ್ಟಿನ್ ಡಿಸೋಜ ಮೇಡಂ ಸ್ಕೌಟ್ ಗೈಡ್ ಮಕ್ಕಳಿಗೆ ಪುಲ್ವಾಮದಲ್ಲಿ ನಡೆದ  ಹೃದಯವಿದ್ರಾವಕ ಘಟನೆಯ ಬಗೆಗೆ ವಿವರಿಸಿ ದೇಶಕ್ಕಾಗಿ ಪ್ರಾಣತೆತ್ತ ವೀರಯೋಧರನ್ನು ನೆನೆದರು ನಂತರ ದಾವಣಗೆರೆಯ ಅಮರ್ ಜವಾನ್ ಉದ್ಯಾನವನಕ್ಕೆ ತೆರಳಿ ಸ್ಕೌಟ್ ಗೈಡ್  ವಿದ್ಯಾರ್ಥಿಗಳಿಂದ ಪುಷ್ಪನಮನ ಸಲ್ಲಿಸಲಾಯಿತು ಸುಬೇದಾರ್ ಮಲ್ಲನಗೌಡ ಪಾಟಿಲ್ ರವರು ಪುಲ್ವಾಮ ಧಾಳಿಯಲ್ಲಿ ಪ್ರಾಣತೆತ್ತ ಸೈನಿಕರ ಬಗೆಗೆ ಮಾಹಿತಿನೀಡಿ ಸ್ಕೌಟ್ ಗೈಡ್ ಮಕ್ಕಳಲ್ಲಿನ ದೇಶಪ್ರೇಮಾಭಿಮಾನವನ್ನು ಕಂಡು ಸಂತಸಪಟ್ಟರು ಈ ಸಂಧರ್ಭದಲ್ಲಿ ಜಿಲ್ಲಾಸಂಸ್ಥೆಯ ಪದಾದಿಕಾರಿಗಳು ಹಾಗು ಸ್ಥಳೀಯ ಸಂಸ್ಥೆಯ ಶ್ರೀನಿವಾಸ್ NL (HWB) ಉಪಸ್ಥಿತರಿದ್ದರು



No comments:

Post a Comment