ನಗರದ ಸಿದ್ಧಗಂಗಾ ಶಾಲಾ-ಕಾಲೇಜುಗಳಲ್ಲಿ ಇಂದು ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರಿಕೆಜಿಯ ಪುಟಾಣಿ ಭುವಿತ್ ಕನಕದಾಸರ ವೇಷ ಧರಿಸಿ ಎಲ್ಲರ ಗಮನ ಸೆಳೆದನು. 2 ನೇ ತರಗತಿ ಬಾಲಕ ಜಯಸೂರ್ಯಸ್ವಾಮಿ ಕನಕದಾಸರ ಪ್ರಸಿದ್ಧ “ದಾಸನಾಗು ವಿಶೇಷನಾಗು” ಕೀರ್ತನೆ ಹಾಡಿದನು. 4 ನೇ ತರಗತಿ ಬಾಲಕಿ ಆರಾಧ್ಯ ಕನಕದಾಸರ ಜೀವನ ಚರಿತ್ರೆಯನ್ನು ಸಂಕ್ಷಿಪ್ತವಾಗಿ ಎಲ್ಲರಿಗೂ ತಿಳಿಸಿಕೊಟ್ಟಳು. ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಯಿಂದ ಪೂಜಿಸಲಾಯಿತು. ಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್ ಡಿʼಸೌಜ ಮತ್ತು ಶಿಕ್ಷಕರು ಹಾಗೂ ಉಪನ್ಯಾಸಕರು ಆಚರಣೆಯಲ್ಲಿ ಭಾವಗಹಿಸಿದರು.

No comments:
Post a Comment